PÀ£ÀßqÀ rArªÀĪÀ
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಓ ಕರ್ನಾಟಕ ಹೃದಯ ಶಿವ
ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು ।। ಬಾರಿಸು ।।
ಕಚ್ಚಾಡುವರನು ಕೂಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು ।। ಬಾರಿಸು ।।
ಕ್ಷಯಿಸೆಶಿವೇತರ ಕೃತಿ ಕೃತಿಯಲ್ಲಿ
ಮೂಡಲಿ ಮಂಗಳ ಮತಿಮತಿಯಲ್ಲಿ
ಕವಿ ಋಷಿ ಸಂತರ ಆದರ್ಶದಲಿ
ಸರ್ವೋದಯವಾಗಲಿ ಸರ್ವರಲಿ ।। ಬಾರಿಸು ।।
ಮೂಡಲಿ ಮಂಗಳ ಮತಿಮತಿಯಲ್ಲಿ
ಕವಿ ಋಷಿ ಸಂತರ ಆದರ್ಶದಲಿ
ಸರ್ವೋದಯವಾಗಲಿ ಸರ್ವರಲಿ ।। ಬಾರಿಸು ।।
- - ಕುವೆಂಪು
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ